Home ಟಾಪ್ ಸುದ್ದಿಗಳು ಫೋನ್ ಕದ್ದಾಲಿಕೆ ಪ್ರಕರಣ: ಮುಂಬೈ ಪೊಲೀಸರಿಂದ ಸಂಜಯ್ ರಾವತ್ ಗೆ ಸಮನ್ಸ್

ಫೋನ್ ಕದ್ದಾಲಿಕೆ ಪ್ರಕರಣ: ಮುಂಬೈ ಪೊಲೀಸರಿಂದ ಸಂಜಯ್ ರಾವತ್ ಗೆ ಸಮನ್ಸ್

ಮುಂಬೈ: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವತ್ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಭಾರತೀಯ ಟೆಲಿಗ್ರಾಫ್ ಆಕ್ಟ್ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ (ವಿಶೇಷ ಶಾಖೆ) ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ ನಲ್ಲಿ ಕೊಲಾಬಾ ಪೊಲೀಸ್ ಠಾಣೆಯಲ್ಲಿ ರಶ್ಮಿ ಶುಕ್ಲಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ಬಿಜೆಪಿಯ ಮಾಜಿ ನಾಯಕ ಖಡ್ಸೆ ಮತ್ತು ಶಿವಸೇನಾ ಸಂಸದ ಸಂಜಯ್ ರಾವತ್ ಅವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು.

ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿದೆ ಎಂದು ಸಂಜಯ್ ರಾವತ್ ಗೆ ನೋಟಿಸ್ ನಲ್ಲಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version