ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ರವಾನಿಸಿದ ದೈಹಿಕ ಶಿಕ್ಷಕ ; ಪ್ರಶ್ನಿಸಿದ ವಿದ್ಯಾರ್ಥಿಗೆ ಹಲ್ಲೆ

Prasthutha|

ಮೈಸೂರು: ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕನೊಬ್ಬ ಲೈಂಗಿಕ ಪ್ರಚೋದನಕಾರಿ ಸಂದೇಶ ಕಳುಹಿಸುತ್ತಿದ್ದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಇಲ್ಲಿನ ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನಿತ್ಯಾನಂದ ಪಾಟಿಗಾರ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಈತನ ವಿರುದ್ದ ನೊಂದ ವಿದ್ಯಾರ್ಥಿಯ ಸಂಬಂಧಿ ಜೋಗನಹಳ್ಳಿ ಗ್ರಾಮದ ಚನ್ನವೀರಯ್ಯ ಎಂಬವರು ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8 ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಗೆ ಶಿಕ್ಷಕ ಪ್ರತಿನಿತ್ಯ ಲೈಂಗಿಕ ಪ್ರಚೋದನಕಾರಿ ಸಂದೇಶಗಳನ್ನು ತನ್ನ ಮೊಬೈಲ್ ಮುಖಾಂತರ ಕಳುಹಿಸುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿನಿಯು ಅದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಬಂಧಿ ವಿಶ್ವನಾಥನಿಗೆ ಈ ವಿಚಾರವನ್ನು ಹೇಳಿ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದಳು. ಈ ಬಗ್ಗೆ ವಿಶ್ವನಾಥ ದೈಹಿಕ ಶಿಕ್ಷಕ ನಿತ್ಯಾನಂದ ಪಾಟಿಗಾರ್ ಬಳಿ ಈ ಬಗ್ಗೆ ಪ್ರಶ್ನಿಸಿದ್ದಾನೆ.

- Advertisement -

ಮರುದಿನ ಶಾಲೆಗೆ ಆಗಮಿಸಿದ ದೈಹಿಕ ಶಿಕ್ಷಕ ವಿಧ್ಯಾರ್ಥಿ ವಿಶ್ವನಾಥನನ್ನು ಕರೆದು ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಶಾಲೆಯಿಂದ ಹೊರ ಹಾಕುತ್ತೇನೆ ಎಂದು ಹೆದರಿಸಿ ಹಲ್ಲೆ ಮಾಡಿದ್ದಾನೆ. ಇದರಿಂದ ಮನನೊಂದ ವಿಶ್ವನಾಥ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಜಿಲ್ಲೆಯ ಕೃಷ್ಣರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

Join Whatsapp