ನಾಡಬಾಂಬ್ ಇಟ್ಟು ಹಂದಿ ಹತ್ಯೆ ಪ್ರಕರಣ: ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ತಂಡ

Prasthutha|

ಕಾರವಾರ: ಹಂದಿಯೊಂದನ್ನು ನಾಡಬಾಂಬ್ ಇಟ್ಟು ಹತ್ಯೆಗೈದಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ನಡೆದಿತ್ತು. ಇದೀಗ ಅದೇ ಪ್ರದೇಶದಲ್ಲಿ ಪೊಲೀಸರು ಸಜೀವ ಬಾಂಬ್​ ಪತ್ತೆ ಮಾಡಿದ್ದು, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿದೆ.

- Advertisement -

ಚೆಂಡಿಯಾದ ಸ್ಮಶಾನದ ಬಳಿ ಆಗಸ್ಟ್​ 4 ರಂದು ನಾಡಬಾಂಬ್ ಸ್ಫೋಟವಾಗಿ ಹಂದಿಯೊಂದು ಸಾವನ್ನಪ್ಪಿತ್ತು. ಈ ಹಂದಿ ಗ್ರಾಮಸ್ಥರೊಂದಿಗೆ ಒಡನಾಟ ಹೊಂದಿತ್ತು. ಅದರ ಸಾವಿನಿಂದ ಇಲ್ಲಿನ ಜನರು ತೀವ್ರ ದುಃಖಿತರಾಗಿದ್ದರು. ಅಲ್ಲದೆ, ತಕ್ಷಣ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಕುರಿತು ಮಾಹಿತಿ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೀಫ್ರನ್ ಥಾಮಸ್ ಫರ್ನಾಂಡಿಸ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದರು.

ಇದರ ಬೆನ್ನಲ್ಲೇ ನಾಡಬಾಂಬ್​ ಸ್ಫೋಟವಾದ ಪ್ರದೇಶದಲ್ಲಿಯೇ ಮತ್ತೊಂದು ನಾಡಬಾಂಬ್​ ಪತ್ತೆಯಾಗಿದೆ. ಸ್ಥಳದಲ್ಲಿ ಮಂಗಳೂರು ಪೊಲೀಸರು ಬ್ಯಾರಿಕೇಡ್​ ಹಾಕಿ ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

Join Whatsapp