ಪೊಲೀಸ್ ಠಾಣೆಯಿಂದ ಪಿಸ್ತೂಲ್, ಸಮವಸ್ತ್ರ ಕಳವು

Prasthutha|

ಲಕ್ನೋ: ಪೊಲೀಸ್ ಠಾಣೆಯಿಂದಲೇ ಸರ್ಕಾರಿ ಪಿಸ್ತೂಲ್ ಮತ್ತು ಸಮವಸ್ತ್ರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಕಾನ್ಪುರದ ನ್ಯೂ ಆಜಾದ್ ನಗರದ ಪೊಲೀಸ್ ಠಾಣೆಯಲ್ಲಿ ನಡೆದಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ  ತೇಜ್ ಸ್ವರೂಪ್ ಸಿಂಗ್ ಅವರು ಔಟ್ ಪೋಸ್ಟ್ ಇನ್ ಚಾರ್ಜ್ ಸುಧಾಕರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ದೊರೆತ ಮೇರೆಗೆ ತೇಜ್ ಸ್ವರೂಪ್ ಸಿಂಗ್, ವಿಧಿವಿಜ್ಞಾನ ತಂಡ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಆರಂಭಿಸಿದ್ದಾರೆ.

- Advertisement -

ನ್ಯೂ ಆಜಾದ್ ನಗರ ಚೌಕಿಯ ಪೋಸ್ಟ್ ಇನ್ ಚಾರ್ಜ್ ಆಗಿ ಸಬ್ ಇನ್ಸ್ ಪೆಕ್ಟರ್ ಸುಧಾಕರ್ ಪಾಂಡೆ ಅವರನ್ನು ನೇಮಿಸಲಾಗಿತ್ತು. ಬುಧವಾರ ತಡರಾತ್ರಿ ಕಳ್ಳರು ಠಾಣೆಯಲ್ಲಿದ್ದ ಪೆಟ್ಟಿಗೆಯನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳತನವಾಗಿರುವ ವಿಷಯ ಉನ್ನತ ಅಧಿಕಾರಿಗಳಿಗೆ ತಿಳಿದಾಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ತರಾತುರಿಯಲ್ಲಿ ಐಜಿ ರೇಂಜ್, ಎಸ್ ಪಿ ಔಟರ್ ಸೇರಿದಂತೆ ಸರ್ಕಲ್ ಫೋರ್ಸ್ ಸ್ಥಳಕ್ಕೆ ಧಾವಿಸಿದೆ. ನಂತರ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಸ್ಥಳಕ್ಕೆ ಕರೆಸಲಾಯಿತು. ಸುಧಾಕರ್ ಪಾಂಡೇ ಅವರ ನಿರ್ಲಕ್ಷ್ಯವೇ ಈ ಕಳ್ಳತನಕ್ಕೆ ಕಾರಣ ಎಂದು ಇದೀಗ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಈ ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ ಪಿ ತೇಜ್ ಸ್ವರೂಪ್ ಸಿಂಗ್ ಅವರು, ಪೊಲೀಸ್ ಠಾಣೆಯಲ್ಲಿಯೇ ಈ ಘಟನೆ ನಡೆದಿದ್ದು, ಸರ್ಕಾರಿ ಪಿಸ್ತೂಲ್ ಮತ್ತು 10 ಕಾಟ್ರಿಡ್ಜ್ ಗಳು ಕಾಣೆಯಾಗಿವೆ. ಈ ವೇಳೆ ಎಸ್ಐ ಔಟ್ ಪೋಸ್ಟ್ನಲ್ಲಿದ್ದರು. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರನ್ನು ಹಿಡಿಯಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.



Join Whatsapp