ಮಂಗಳೂರು| ವಿಮಾನದ ಪೆಟ್ರೋಲ್ ಕಲಬೆರಕೆ ಪ್ರಕರಣ: ಅಧಿಕಾರಿಗಳಿಂದ ದಾಳಿ

Prasthutha|

ಮಂಗಳೂರು: ಸುರತ್ಕಲ್ ಬಳಿಯ ಬಾಳಾದಲ್ಲಿ ವಿಮಾನಗಳಿಗೆ ಬಳಕೆ ಮಾಡಲಾಗುವ ದುಬಾರಿ ಪೆಟ್ರೋಲ್ ಗೆ ಸೀಮೆ ಎಣ್ಣೆ ರಾಸಾಯನಿಕ ಕಲಬೆರಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ಒಟ್ಟೆಕಾಯರ್ ತಿರುವು ಬಳಿ ದಾಳಿ ನಡೆಸಿದಾಗ ಗುಪ್ತವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಎರಡು ಟ್ಯಾಂಕರ್ ಗಳಿಂದ ಪೆಟ್ರೋಲನ್ನು ಗುಪ್ತವಾಗಿ ನಿರ್ಮಿಸಿದ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು.


ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.



Join Whatsapp