ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

Prasthutha|

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.

- Advertisement -

ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು.

ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ ಭೇಟಿ ಮಾಡಿ ಮಾತನಾಡಲಿದ್ದಾರೆ.

- Advertisement -



Join Whatsapp