Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು: ಮೋದಿ ಆಗ್ರಹ

ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು: ಮೋದಿ ಆಗ್ರಹ

ಸೋನಿಪತ್: ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.


ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪ ಮಾಡಿರುವ ಅವರು, ಹೈಕಮಾಂಡ್ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದಿದ್ದಾರೆ.


ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ, ಹೈಕೋರ್ಟ್ ಚಾಟೀ ಬೀಸಿ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ.

Join Whatsapp
Exit mobile version