ಪ್ರಧಾನಿ ಮೋದಿ, ಜೆಡಿಎಸ್ ನಾಯಕರು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ: ಸುರ್ಜೇವಾಲಾ

Prasthutha|

ಬೆಂಗಳೂರು: ಪ್ರಧಾನಿ ಮೋದಿ ಮತ್ತು ಜೆಡಿಎಸ್ ನಾಯಕರು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ. ಇಂಥ ಪ್ರಕರಣದ ದೇಶದಲ್ಲೇ ಮೊದಲು. ಇದು ಅತ್ಯಂತ ಹೇಯ ಮತ್ತು ಅಪರೂಪದ ಪ್ರಕರಣವಾಗಿದ್ದು, ಸಾವಿರಾರು ಮಹಿಳೆಯರು ದೌರ್ಜನ್ಯ ಅನುಭವಿಸಿದ್ದಾರೆ ಎಂದು ಹೇಳಿದರು.

Join Whatsapp