ಮೋದಿ ಇಂದು ಮಂಗಳೂರಿಗೆ

Prasthutha|

ಬಿಜೆಪಿ ಸರಕಾರದ ಭ್ರಷ್ಟಾಚಾರದ ಕುರಿತು ಪ್ರಧಾನಿ ಮಾತಾಡಲಿದ್ದಾರೆಯೇ ಎಂದು ಪ್ರಶ್ನಿಸಿದ ನೆಟ್ಟಿಗರು

- Advertisement -

ಮಂಗಳೂರು: ಸೆಪ್ಟೆಂಬರ್ 1 ರಿಂದ 2 ರವರೆಗೆ ದಕ್ಷಿಣ ಭಾರತದ ಕಿರು ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸಮಾವೇಶದಲ್ಲಿ ಮೋದಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ಕುರಿತು ಮಾತಾಡಲಿದ್ದಾರೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2 ರಂದು ಬೆಳಿಗ್ಗೆ ಕೇರಳಕ್ಕೆ ಆಗಮಿಸಿ. ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮಕ್ಕೆ ಜನಸೇರಿಸಲು ಬಿಜೆಪಿ ಸಂಸದರು ಮತ್ತು ಶಾಸಕರು ಹರಸಾಹಸ ಪಡುತ್ತಿದ್ದಾರೆ.

- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕರ್ನಾಟಕದ ವಿವಿಧ ರಾಜಕಾರಣಿಗಳು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಲ್ಲಿ ಪ್ರಧಾನಿಗೆ ಸ್ವಾಗತ ಸಂದೇಶಗಳನ್ನು ಪೋಸ್ಟ್ ಮಾಡಿದ್ದು, ಸಾರ್ವಜನಿಕರು ಮಾತ್ರ ಮೋದಿ ಇವತ್ತು ರಾಜ್ಯದ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಮಾತಾಡಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ

Join Whatsapp