ಪೋಕ್ಸೋ ಪ್ರಕರಣ: ಜು.15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬಿಎಸ್’ವೈಗೆ ಸಮನ್ಸ್ ಜಾರಿ

Prasthutha|

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

- Advertisement -


ಬಿಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.


ವಿಶೇಷ ತನಿಖಾ ತಂಡ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಬಿ.ಎಸ್.ಯಡಿಯೂರಪ್ಪ, ಅವರ ಸಹಚರರಾದ ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ.ಮರಿಸ್ವಾಮಿ ಅವರು ಜು.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.

- Advertisement -

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಗುರುವಾರ ವಿಚಾರಣೆ ನಡೆಸಿ ಸಮನ್ಸ್ ಜಾರಿಗೊಳಿಸಲು ಆದೇಶಿಸಿದರು.

Join Whatsapp
Exit mobile version