ಕವಿತೆ, ಹಾಸ್ಯ ದ್ವೇಷಕ್ಕೆ ಕಾರಣವಾಗದು: ಸುಪ್ರೀಂ ಕೋರ್ಟ್

- Advertisement -

ನವದೆಹಲಿ: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ‘ಕೇವಲ ಕವಿತೆ ವಾಚನ, ಹಾಸ್ಯ, ಯಾವುದೇ ರೀತಿಯ ಕಲೆ ಅಥವಾ ಮನರಂಜನೆಯು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಕಾರಣವಾಗುತ್ತದೆ ಎನ್ನಲಾಗದು’ ಎಂದು ಹೇಳಿದೆ.

- Advertisement -

ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಗಢಿ ವಿರುದ್ಧದ ಎಫ್‌ ಐಆರ್ ರದ್ದುಗೊಳಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ವಲ್‌ ಭುಯಾಂ ಅವರ ಪೀಠವು, ‘ಕಾವ್ಯ, ನಾಟಕ, ಚಲನಚಿತ್ರ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿ, ವಿಡಂಬನ ಸಾಹಿತ್ಯ ಹಾಗೂ ಕಲೆ ಸೇರಿದಂತೆ ವೇದಿಕೆ ಕಾರ್ಯಕ್ರಮಗಳು ಮಾನವನ ಜೀವನವನ್ನು ಹೆಚ್ಚು ಅರ್ಥಪೂರ್ಣವನ್ನಾಗಿಸಿದೆ’ ಎಂದು ಹೇಳಿತು.

‘ಯೆ ಖೂನ್ ಸೆ ಪ್ಯಾಸೆ ಬಾತ್ ಸುನೋ…’ ಎಂಬ ಕವಿತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಗುಜರಾತ್‌ ನ ಜಾಮ್‌ ನಗರದಲ್ಲಿ ಇಮ್ರಾನ್‌ ವಿರುದ್ಧ ಜನವರಿ 3ರಂದು ಪ್ರಕರಣ ದಾಖಲಾಗಿತ್ತು.

- Advertisement -

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್‌ ನ ಜ.17ರ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ‘ಈ ಕವಿತೆಗೆ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ನಿರ್ದಿಷ್ಟ ಗುಂಪಿನ ಜತೆ ಸಂಬಂಧವಿಲ್ಲ’ ಎಂದು ಹೇಳಿತು.

- Advertisement -


Must Read

Related Articles