ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು!

Prasthutha|

ಬೆಂಗಳೂರು: ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ.

ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ಆರೋಪಿ ರಾಮಾಂಜನಿ ಎಂಬಾತನನ್ನು ಮಾರ್ಚ್ 18 ರಂದು ಅಪಹರಣ ಮಾಡಲಾಗಿತ್ತು. ಈ ವಿಚಾರವಾಗಿ ರಾಮಾಂಜನಿಯ ಸಂಬಂಧಿ ಶಿವರಾಮಯ್ಯ ಎಂಬವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಕೂಡಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದ ಬಾಗಲೂರು ಪೊಲೀಸರು ರಾಮಾಂಜನಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಪೊಲೀಸರೇ ಅಪಹರಣ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.

Join Whatsapp