Home ಜಾಲತಾಣದಿಂದ ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು!

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು!

ಬೆಂಗಳೂರು: ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ.

ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ಆರೋಪಿ ರಾಮಾಂಜನಿ ಎಂಬಾತನನ್ನು ಮಾರ್ಚ್ 18 ರಂದು ಅಪಹರಣ ಮಾಡಲಾಗಿತ್ತು. ಈ ವಿಚಾರವಾಗಿ ರಾಮಾಂಜನಿಯ ಸಂಬಂಧಿ ಶಿವರಾಮಯ್ಯ ಎಂಬವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಕೂಡಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದ ಬಾಗಲೂರು ಪೊಲೀಸರು ರಾಮಾಂಜನಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಪೊಲೀಸರೇ ಅಪಹರಣ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.

Join Whatsapp
Exit mobile version