ಮಂಗಳೂರು | ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ : ಓರ್ವನ ಬಂಧನ

Prasthutha|

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಉಳ್ಳಾಲದ ಕೋಟೆಪುರ ಪ್ರದೇಶದ ಮರಳು ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದುದರ ಖಚಿತ ಮಾಹಿತಿಯನ್ನು ಪಡೆದ ಪೋಲಿಸರು ಇಂದು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

ಪ್ರಕರಣಕ್ಕೆ ಸಂಬಂದಿಸಿದಂತೆ ಕೋಟೆಪುರ ನಿವಾಸಿ ಶಾರುಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು . ಹದಿನೈದು ಮಂದಿಯ ಮೇಲೆ FIR ದಾಖಲಿಸಲಾಗಿದೆ.

ದಾಳಿ ವೇಳೆ ಅಕ್ರಮ ಮರಳುಗಾರಿಕೆಗೆ ಬೆಂಗಾವಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp