ಶುಕ್ರವಾರದ ನಮಾಝ್ ಮನೆಯಲ್ಲೇ ನಿರ್ವಹಿಸುವಂತೆ ಪೊಲೀಸ್ ಆಯುಕ್ತರ ಮನವಿ

Prasthutha|

ಮಂಗಳೂರು: ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಣೆ ವಿಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶುಕ್ರವಾರದ ನಮಾಝನ್ನು ಮನೆಯಲ್ಲೇ ನಿರ್ವಹಿಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮನವಿ ಮಾಡಿದ್ದಾರೆ.

- Advertisement -

ಸರತ್ಕಲ್, ಪಣಂಬೂರು, ಮೂಲ್ಕಿ, ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಈ ಪ್ರದೇಶಗಳಲ್ಲಿ ಮುಸ್ಲಿಮ್ ಬಾಂಧವರು ಶುಕ್ರವಾರದ ನಮಾಝ್ ಮನೆಯಲ್ಲೆ ನಿರ್ವಹಿಸಬೇಕು ಅಥವಾ ಮನೆ ಹತ್ತಿರದ ಮಸೀದಿಗಳಲ್ಲಿ ನಿರ್ವಹಿಸಿ ಎಂದು ಮನವಿ ಮಾಡಿದರು.

ಕಳೆದ ರಾತ್ರಿ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳ ತಂಡ ಹತ್ಯೆಗೈದಿತ್ತು.

Join Whatsapp