ಕತ್ತಲೆಯ ಮರೆಯಲ್ಲಿ ವ್ಯಕ್ತಿಯನ್ನು ಹೊಡೆದು ಕೊಂದ ದೆಹಲಿ ಪೊಲೀಸ್ ಕಾನ್ ಸ್ಟೇಬಲ್ ಬಂಧನ

Prasthutha|

ನವದೆಹಲಿ ಜುಲೈ 29: ವ್ಯಕ್ತಿಯೊಬ್ಬರನ್ನು ಥಳಿಸಿ ಕೊಂದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರನ್ನು ಥಳಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮೋನು ಸಿರೋಹಿ ಎಂಬ ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ ಈ ಘಟನೆಯ ಕುರಿತು ಉನ್ನತ ತನಿಖೆ ನಡೆಯುತ್ತಿದೆಯೆಂದು ಡಿಸಿಪಿ ಪ್ರಿಯಾಂಕ ಕಶ್ಯಪ್ ತಿಳಿಸಿದ್ದಾರೆ.

- Advertisement -


ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ನಂತರ ತನ್ನ ಸಹಚರರೊಂದಿಗೆ ವಾಹನದಲ್ಲಿ ಸಾಗಿಸುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯ ಶವ ಮೀರತ್ ಕಾಲುವೆಯ ಬಳಿ ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಕುಟುಂಬವು ಈ ಹಿಂದೆ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ನ್ಯೂ ಅಶೋಕ ನಗರದ ಠಾಣೆಯಲ್ಲಿ ದೂರು ದಾಖಲಿಸಿತ್ತು. ಆದರೆ ದೂರು ನೀಡಿದ 24 ಘಂಟೆಗಳ ನಂತರವು ಕೂಡ ಕೇಸ್ ದಾಖಲಿಸಲು ಹಿಂದೇಟು ಹಾಕಿದೆಯೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ನ್ಯೂ ಅಶೋಕ್ ನಗರದ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಲು ಹಿಂದೇಟು ಹಾಕಿದ ಪೊಲೀಸ್ ನನ್ನು ಅಮಾನತುಗೊಳಿಸಿದ್ದಾರೆ.

Join Whatsapp