Home ಟಾಪ್ ಸುದ್ದಿಗಳು ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ

ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ

ಯಾದಗಿರಿ: ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.


ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್ ಟೇಬಲ್ ದೇವೇಂದ್ರಪ್ಪ (40) ಮೃತರು.


ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ ಬಾಧಿಸುತ್ತಿದ್ದ ಕಾರಣ ಜೂನ್ ನಿಂದ ರಜೆಯಲ್ಲಿದ್ದರು. ಹೀಗಾಗಿ ಬುಧವಾರ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವ ಸಂದರ್ಭ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Join Whatsapp
Exit mobile version