ಹಾಸನ: ದೂರು ಕೊಡಲು ಬಂದ ಪತ್ನಿಗೆ ಎಸ್ ಪಿ ಕಛೇರಿ ಎದುರೇ ಚಾಕು ಹಾಕಿ ಕೊಂದ ಪೊಲೀಸ್ ಕಾನ್ಸ್ ಟೇಬಲ್!

Prasthutha|

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಮುಂಜಾನೆ ನಡೆದಿದೆ.

- Advertisement -


ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕನಾಥ್ ಆರೋಪಿಯಾಗಿದ್ದು, ಮಮತಾ ಕೊಲೆಗೀಡಾದವರು.


ಮಮತಾಗೆ ಚಾಕುವಿನಿಂದ ಇರಿದಿದ್ದನ್ನು ಕಂಡ ತಕ್ಷಣ ಪೊಲೀಸರು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಮತಾ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿ ಕಾನ್ಸ್ಟೇಬಲ್ ಅನ್ನು ವಶಕ್ಕೆ ಪಡೆದಿದ್ದಾರೆ.

- Advertisement -


ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಂದು ಮುಂಜಾನೆ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

Join Whatsapp