ಪೊಲೀಸ್ ಕಾನ್ಸ್ ಟೇಬಲ್’ ಗೆ ಕಪಾಳ ಮೋಕ್ಷ : ಬಿಜೆಪಿ ಮಾಜಿ ಶಾಸಕ ಸೇರಿ ಐವರ ವಿರುದ್ಧ FIR

Prasthutha|

ರಾಯಚೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಬಗ್ಗೆ ನೀಡಿರುವ ಹೇಳಿಕೆ ವಿರೋಧಿಸಿ, ನಗರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚುವುದನ್ನು ಆಕ್ಷೇಪಿಸಿದ ಪೊಲೀಸ್ ಕಾನ್ಸ್ ಟೇಬಲ್‌ಗೆ ಬಿಜೆಪಿ ಮಾಜಿ ಶಾಸಕ ಕಪಾಳ ಮೋಕ್ಷ ಮಾಡಿದ್ದು ರಾಜ್ಯಾದ್ಯಂತ ಆಕ್ರೋಶಕ್ಕೆ ಗುರಿಯಾಗಿತ್ತು.

- Advertisement -


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪಾಪಾರೆಡ್ಡಿ, ಬಿಜೆಪಿ ಮುಖಂಡರಾದ ಜೇಮ್ಸ್, ಹನುಮೇಶ್, ಶಿವು ಜಾಲಿಬೆಂಚಿ ಹಾಗೂ ಸಿದ್ಧನಗೌಡ ನೆಲಹಾಳು ಸೇರಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಪ್ರತಿಭಟನೆ ವೇಳೆ ಮಾಜಿ ಶಾಸಕ ಪಾಪಾರೆಡ್ಡಿಯವರು ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಗೆ ಕಪಾಳ ಮೋಕ್ಷ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಐವರ ವಿರುದ್ಧ ಐಪಿಸಿ ಸೆಕ್ಷನ್ 143, 147, 323, 504, 283, 353 ಸಹಿತ 149 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Join Whatsapp