ಪೊಲೀಸ್ ಕಾನ್ಸ್ ಟೇಬಲ್ ಹತ್ಯೆಗೈದಿದ್ದ ರೌಡಿ ಎನ್ ಕೌಂಟರ್ ಗೆ ಬಲಿ

Prasthutha|

ಲಖನೌ : ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಅಕ್ರಮ ಮದ್ಯ ಜಫ್ತಿ ಮಾಡಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿ, ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ ಮಾಡಿ, ಇನ್ಸ್ ಪೆಕ್ಟರ್ ಗಾಯಗೊಳಿಸಿದ್ದ ರೌಡಿ ಎನ್ ಕೌಂಟರ್ ನಲ್ಲಿ ಹತನಾಗಿದ್ದಾನೆ.

- Advertisement -

ಕಾಸ್ ಗಂಜ್ ಜಿಲ್ಲೆಯಲ್ಲಿ ರೌಡಿ ಇಲ್ಕಾರ್ ಎಂಬಾತನನ್ನು ಪೊಲೀಸರು ಗುಂಡಿಕ್ಕಿ ಸಾಯಿಸಿದ್ದಾರೆ.

ಪೊಲೀಸರ ಮೇಲೆ ದಾಳಿ ಮಾಡಿ ನಾಪತ್ತೆಯಾಗಿದ್ದ ರೌಡಿಯ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದರು. ಈ ವೇಳೆ ಆತ ಕಾಳಿ ನದಿ ಬಳಿ ಇರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಆತನನ್ನು ಬಂಧಿಸಲು ಮುಂದಾಗಿದ್ದಾರೆ.

- Advertisement -

ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಸುತ್ತುವರೆದಿದ್ದು, ಈ ವೇಳೆ ಆತನೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಆತ ಬಲಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ನಡೆಸುತ್ತಿದ್ದ ಅನಧಿಕೃತ ಸಾರಾಯಿ ಫ್ಯಾಕ್ಟರಿಯ ಮೇಲೆ ಮಂಗಳವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರ ಮೇಲೆ ಗೂಂಡಾಗಳು ದಾಳಿ ನಡೆಸಿದ್ದರು. ಘಟನೆಯಲ್ಲಿ ಪೊಲೀಸ್ ಪೇದೆ ದೇವೇಂದ್ರ ಮೃತಪಟ್ಟಿದ್ದು, ಎಸ್ ಐ ಅಶೋಕ್ ಗಂಭೀರ ಗಾಯಗೊಂಡಿದ್ದರು.

Join Whatsapp