ತುಳು ಧ್ವಜಕ್ಕೆ ಅವಮಾನ | ಯುವಕನ ಬಂಧನ

Prasthutha|

ಮಂಗಳೂರು: ತುಳು ಧ್ವಜಕ್ಕೆ ಅವಮಾನ ಮಾಡಿರುವ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ತುಳು ಭಾಷೆಯ ಧ್ವಜಕ್ಕೆ ಅವಮಾನ ಮಾಡಿದ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರ ತಂಡ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ.

- Advertisement -

ಬಂಧಿತ ಯುವಕನನ್ನು ಸೂರ್ಯ ಎನ್.ಕೆ. ಗುರುತಿಸಲಾಗಿದೆ.  ಪಾದ ರಕ್ಷೆಯಲ್ಲಿ ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದ ಈತ, “ಇವತ್ತು ತುಳುನಾಡ್ ಚಪ್ಪಲ್ ಬಂದಿದೆ. ನಾಳೆ ಬಿಕಿನಿಯು ಬರಬಹುದು. ಹಾಕಿಕೊಂಡು ಮಜಾ ಮಾಡಿ” ಎಂದು ಆಕ್ಷೇಪಾರ್ಹ ಸಂದೇಶವನ್ನು ಹರಿಯಬಿಟ್ಟಿದ್ದ ಎನ್ನಲಾಗಿದೆ.

ಈ ಆಕ್ಷೇಪಾರ್ಹ ಪೋಸ್ಟ್ ವಿರುದ್ಧ ಕಾರ್ಪೋರೇಟರ್ ಶಶಿಧರ್ ಹೆಗ್ಡೆ ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಬರ್ಕೆ ಹಾಗೂ ಉರ್ವ ಠಾಣಾ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Join Whatsapp