ಹಿಂದುತ್ವ ಮುಖಂಡರಂತೆ ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ

Prasthutha|

ವಿಜಯಪುರ: ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ ಮತ್ತು ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -


ಕನ್ಯ್ಪೂಜ್ ಆಗಬೇಡಿ..! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್ ಎಂಬ ಸಾಲುಗಳೊಂದಿಗೆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.


ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಆಯುಧಪೂಜೆ ನಿಮಿತ್ತ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಸಂಘಟನೆಗಳ ಮುಖಂಡರಂತೆ ಪೊಲೀಸ್ ಅಧಿಕಾರಿ , ಸಿಬ್ಬಂದಿ ಧಿರಿಸು ತೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು .

- Advertisement -


ಇನ್ನು ಕಾಪು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೂಡ ಹಿಂದು ಸಂಘಟನೆಯ ಮುಖಂಡರಂತೆ ಕೇಸರಿ ಬಟ್ಟೆ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಫೋಟೋ ತೆಗೆಸಿದ್ದರು. ಇದು ಕೂಡ ಸಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.

Join Whatsapp