Home ಟಾಪ್ ಸುದ್ದಿಗಳು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ| ಶಾಸಕರ ಪುತ್ರ ಸೇರಿದಂತೆ 24 ಮಂದಿಯ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ| ಶಾಸಕರ ಪುತ್ರ ಸೇರಿದಂತೆ 24 ಮಂದಿಯ ವಿರುದ್ಧ ಪ್ರಕರಣ ದಾಖಲು

ಸಿಂಧನೂರ: ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶಹರ ಪೊಲೀಸ್ ಠಾಣೆಯಲ್ಲಿ ಸಿಂಧನೂರ ಶಾಸಕರ ಪುತ್ರ ಅಭಿಷೇಕ ನಾಡಗೌಡ ಸೇರಿ 24 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಸಿಂಧನೂರಿನಲ್ಲಿ ನೂತನವಾಗಿ ನಿರ್ಮಿಸಿದ ರಂಗ ಮಂದಿರದ ಮುಂದೆ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಸ್ಥಾಪಿಸಿ ರಂಗ ಮಂದಿರಕ್ಕೆ ಅಪ್ಪು ಹೆಸರಿಡಬೇಕು ಎಂದು ಒತ್ತಾಯಿಸಿ ಶಾಸಕ ವೆಂಕಟರಾವ್ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಮೆರವಣಿಗೆಯನ್ನು ಪೊಲೀಸರೊಂದಿಗೆ ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮತ್ತು ಇತರ ಅಧಿಕಾರಿಗಳು ತಡೆದಿದ್ದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪಿಎಸ್ಐ ಮಣಿಕಂಠ ಮೇಲೆ ಹಲ್ಲೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Join Whatsapp
Exit mobile version