ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ; ಆರೋಪಿ ಬಂಧನ

Prasthutha|

ಶಿವಮೊಗ್ಗ: ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ರೌಡಿಯೊಬ್ಬನ  ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.‌

- Advertisement -

ಆರೋಪಿಯನ್ನುಬುದ್ದನಗರದ ಹರ್ಷದ್ ಯಾನೆ ಜಾಮೂನ್ ಹರ್ಷದ್ (30) ಎಂದು ಗುರುತಿಸಲಾಗಿದೆ.ಈತನ ಮೇಲೆ   ಮಾರಣಾಂತಿಕ ಹಲ್ಲೆ, ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 05 ಪ್ರಕರಣಗಳಿವೆ.

ಇವುಗಳಲ್ಲಿ ಕೋಟೆ ಪೊಲೀಸ್ ಠಾಣೆಯ ಮಾರಣಾಂತಿಕ ಹಲ್ಲೆ ಪ್ರಕರಣವೊಂದರಲ್ಲಿ 2017 ಜು.10 ರಂದು ನ್ಯಾಯಾಲಯವು 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಸರ್ವೋಚ್ಚ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದ ಆರೋಪಿಯು  ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದನು.

- Advertisement -

ಜೂ. 01 ಬುಧವಾರದಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ ಬಗ್ಗೆ ಪ್ರಕರಣ ದಾಖಲಿಕೊಂಡ ತುಂಗಾನಗರ ಠಾಣಾ ಸಿಬ್ಬಂದಿ ತನಿಖೆ ಕೈಗೊಂಡಿದ್ದರು. ಕಾರ್ಯಾಚರಣೆಯ ವೇಳೆ ಆರೋಪಿ ಹರ್ಷದ್ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾನೆ. ತಕ್ಷಣವೇ ತುಂಗಾನಗರ  ಇನ್ಸ್ಪೆಕ್ಟರ್ ಮಂಜುನಾಥ್ ತಮ್ಮ ಮತ್ತು ಸಿಬ್ಬಂದಿಗಳ ಆತ್ಮ ರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಶೂಟ್ ಮಾಡಿದ್ದಾರೆ. ಗಾಯಗೊಂಡ ಆರೋಪಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp