ಜೂಜಾಟದ ಅಡ್ಡೆಗೆ ಪೊಲೀಸ್ ದಾಳಿ; ನಗದು ಸಹಿತ ಆರೋಪಿಗಳ ಬಂಧನ

Prasthutha|

ಚಿಕ್ಕಮಗಳೂರು: ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದನ್ನು ವಶಕ್ಕೆ ಪಡೆದಿದುವ ಘಟನೆ ನಗರದ ಕೋಟೆಯ ಮೂರುಮನೆ ಹಳ್ಳಿಯಲ್ಲಿ ನಡೆದಿದೆ.

- Advertisement -


ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಚಿಕ್ಕಮಗಳೂರು ಪೊಲೀಸರು 7 ಜನ ಆರೋಪಿಗಳು ಮತ್ತು 33,430 ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂಭತ್ತು ಜನ ಆರೋಪಿಗಳು ಜೂಜಾಟದಲ್ಲಿ ತೊಡಗಿದ್ದು ದಾಳಿಯ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.


ಬಂಧಿತರನ್ನು ಸಿ.ಎನ್ ಚಂದ್ರಶೇಖರ್, ಸಿ.ಎಂ ವಿನಯ್ ಕುಮಾರ್, ಸಿ.ಎಸ್ ಹರೀಶ, ಅಶ್ವಥ್, ರಾಕೇಶ್, ರಕ್ಷಿತ್, ರಂಜಿತ್ ಕುಮಾರ್, ಕೆ.ಪಿ ನಟರಾಜ್ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ನಗರ ಪಿ.ಎಸ್.ಐ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Join Whatsapp