Home ಟಾಪ್ ಸುದ್ದಿಗಳು ಪ್ರತಿಭಟನನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ಪ್ರತಿಭಟನನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

New Delhi: Tear gas used to disperse farmers attempting to break barricades for the 'Kisan Gantantra Parade' in protest against Centre's farm reform laws, on the occasion of 72nd Republic Day, near Akshardham in New Delhi, Tuesday, Jan. 26, 2021. (PTI Photo/Arun Sharma)(PTI01_26_2021_000078A)

ಜಜ್ಜರ್: ಕೇಂದ್ರದ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಜಲಫಿರಂಗಿ ನಡೆಸಿ ಚದುರಿಸಿದ ಘಟನೆ ಹರ್ಯಾಣದಲ್ಲಿ ನಡೆದಿದೆ.


ಹರ್ಯಾಣದ ಜಜ್ಜರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದೇ ವೇಳೆ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರೈತರು ಚೌಟಾಲ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆಯಿತು.


ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಈ ವೇಳೆ ಜಲಫಿರಂಗಿ ಪ್ರಯೋಗಿಸಿದರು. ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಉಪ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ

Join Whatsapp
Exit mobile version