ಲಾಠಿಚಾರ್ಜ್ ವೇಳೆ ಪೊಲೀಸರಿಂದ ಕಬಡ್ಡಿ ತಂಡ -ಸ್ಪೆಷಲ್ ಸ್ಕ್ವಾಡ್ ಬಳಕೆ | ಸಿಎಫ್ ಐ ಗಂಭೀರ ಆರೋಪ

Prasthutha|

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ NEPಯನ್ನು ವಿರೋಧಿಸಿ ವಿದ್ಯಾರ್ಥಿಗಳು ನಿನ್ನೆ ನಡೆಸಿದ ವಿಧಾನಸೌಧ ಮುತ್ತಿಗೆ ಸಂದರ್ಭ ಪೊಲೀಸರು ಕಬಡ್ಡಿ ತಂಡ -ಸ್ಪೆಷಲ್ ಸ್ಕ್ವಾಡ್ ಬಳಸಿ ಅಮಾನವೀಯವಾಗಿ ಲಾಠಿಜಾರ್ಜ್ ನಡೆಸಿದ್ದಾರೆ. ತಪ್ಪಿತಸ್ಥ ಮತ್ತು ಅತ್ಯಂತ ಹೀನಾಯವಾಗಿ ವರ್ತಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಜಾರ್ಜ್ ಸಂದರ್ಭ ತೀವ್ರವಾಗಿ ಗಾಯಗೊಂಡವರು ಪತ್ರಿಕಾಗೋಷ್ಠಿ ನಡೆಸಿದ್ದು, ಪೊಲೀಸರು ಅತ್ಯಂತ ಅಮಾನವೀಯವಾಗಿ ನಮ್ಮ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಶ್ನೆ ಮಾಡೋದೇ ತಪ್ಪಾ ಎಂದು ಪ್ರಶ್ನಿಸುತ್ತಾ, ಮುಕ್ತವಾಗಿ ಚರ್ಚೆ ಮಾಡದೆಯೇ ಯಾಕೆ ಬೇಕಿತ್ತು ಈ NEP?. ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ನಾವು ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ವಿದ್ಯಾರ್ಥಿಗಳ ಮೇಲೆ ಹೀನಾಯವಾಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು. ನಮಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಗೂಂಡಾಗಳ ರೀತಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

Join Whatsapp