ಯತ್ನಾಳ್ ಒಡೆತನದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ

Prasthutha|

ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಎಥೆನಾಲ್ ಕಂಪನಿಗೆ ಬೆಳಗಾವಿ ವಿಭಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -


ಚಿಂಚೋಳಿಯ ಹೊರವಲಯದಲ್ಲಿರುವ ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿತ್ತು. ಆದೇಶದ ಮೇರೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳ ಪಾಲನೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.


ಕಾರ್ಖಾನೆಯ ಒಳಭಾಗದಲ್ಲಿ ವಿಡಿಯೋ ಮಾಡಿಕೊಂಡು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp
Exit mobile version