ಪೂಂಛ್ ದಾಳಿ ಬಿಜೆಪಿಯ ಲೋಕಸಭಾ ಚುನಾವಣಾ ಸ್ಟಂಟ್: ಪಂಜಾಬ್ ಸಿಎಂ

Prasthutha|

ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯು ಈ ಬಾರಿಯ ಲೋಕಸಭೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮಾಡಿರುವ ಸಾಹಸ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಮತ್ತು ಜಲಂಧರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಚರಣ್ ಜಿತ್ ಸಿಂಗ್ ಚನ್ನಿ, “ಇವೆಲ್ಲ ಗಿಮಿಕ್ ಆಗಿದ್ದು, ಭಯೋತ್ಪಾದಕ ದಾಳಿಯಲ್ಲ. ಇವು ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್ ಅಲ್ಲದೆ ಮತ್ತೇನಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಬಿಜೆಪಿಯು ಜನರ ಜೀವ ಮತ್ತು ದೇಹಗಳೊಂದಿಗೆ ಆಟವಾಡುತ್ತಿದೆ” ಎಂದು ಆರೋಪಿಸಿದ್ದಾರೆ.

Join Whatsapp