ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಿರಿಯ ಸದಸ್ಯ ಹೈದರ್ ನೀರ್ಸಾಲ್ ನಿಧನಕ್ಕೆ ಗಣ್ಯರ ಸಂತಾಪ

Prasthutha|

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹಿರಿಯ ಸದಸ್ಯ, ಸಾಮಾಜಿಕ ಕಾರ್ಯಕರ್ತ ಹೈದರ್ ನೀರ್ಸಾಲ್ ಅವರ ನಿಧನಕ್ಕೆ ವಿವಿಧ ಸಂಘಟನೆಗಳು, ರಾಜಕೀಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯ ಹೈದರ್ ನೀರ್ಸಾಲ್ ಅವರು ತಮ್ಮ ಎಲ್ಲಾ ಅನಾರೋಗ್ಯ ಮತ್ತು ಅಸೌಖ್ಯದ ನಡುವೆಯೂ ಸಂಘಟನೆ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮದಲ್ಲಿ ತಮ್ಮನ್ನು ಅಹರ್ನಿಶಿ ತೊಡಗಿಸಿಕೊಂಡಿದ್ದರು. ಅವರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಅವರ ಎಲ್ಲಾ ಸತ್ಕರ್ಮಗಳನ್ನು ಭಗವಂತ ಸ್ವೀಕರಿಸಲಿ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ನಾಸಿರ್ ಪಾಷ ಸಂತಾಪ ಸೂಚಿಸಿದ್ದಾರೆ.

- Advertisement -


ಪಾಪ್ಯುಲರ್ ಫ್ರಂಟ್ಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹಮ್ಮದ್ ತೀವ್ರ ಸಂತಾಪ ಸೂಚಿಸಿದ್ದು, ಸಂಘಟನೆಯ ಹಿರಿಯ ಸದಸ್ಯರು, ಆತ್ಮೀಯರಾದ ಹೈದರ್ ನೀಸಾ೯ಲ್ ನಮ್ಮೆಲ್ಲರನ್ನು ಅಗಲಿದ್ದಾರೆ. ಸಂಘಟನೆಯ ಆರಂಭಿಕ ಕಾಲದಿಂದಲೂ ವಿವಿಧ ಸ್ತರಗಳಲ್ಲಿ ನಾಯಕತ್ವವನ್ನು ವಹಿಸಿಕೊಂಡು ಸಂಘಟನೆಯನ್ನು ಮುನ್ನಡೆಸಿದವರು. ಸೃಷ್ಟಿಕತ೯ ಅವರ ಪಾಪಗಳನ್ನೆಲ್ಲ ಮನ್ನಿಸಲಿ, ಕುಟುಂಬಿಕರಿಗೆ, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.


ಎಸ್ ಡಿಪಿಐ ದ.ಕ. ಜಿಲ್ಲಾ ಅಧ್ಯಕ್ಷ ಅಬೂಬಕ್ಕರ್ ಕುಳಾಯಿ ತೀವ್ರ ಸಂತಾಪ
SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ , ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹೈದರ್ ನೀರ್ಸಾಲ್ ಉಜಿರೆ (ಬೆಳ್ತಂಗಡಿ) ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಎಸ್ ಡಿಪಿಐ ಪಕ್ಷದ ಆರಂಭದಿಂದ ಹಿಡಿದು ಈವರೆಗೆ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಹಲವು ಸಾಮಾಜಿಕ ಸಂಘಟನೆಗಳಲ್ಲಿ ಹಾಗೂ ಸೇವೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರು ಬೆಳ್ತಂಗಡಿ ತಾಲೂಕಿನಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಎಲ್ಲರೊಂದಿಗೆ ಸೌಮ್ಯ ಸ್ವಾಭಾವದಿಂದ ವರ್ತಿಸುತ್ತಿದ್ದ ವ್ಯಕ್ತಿತ್ವ ಹೊಂದಿದ್ದರು. ಅವರ ಅಗಲುವಿಕೆ ಪಕ್ಷಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸೃಷ್ಟಿಕರ್ತನು ಅವರ ಕುಟುಂಬಕ್ಕೆ, ಬಂದು ಬಳಗಕ್ಕೆ ಸ್ನೇಹಿತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -


ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸಂತಾಪ
ಉಜಿರೆಯ ಹೈದರ್ ನೀರ್ಚಾಲ್ ರವರ ನಿಧನದಿಂದ ಸಮಾಜಕ್ಕೆ ದೊಡ್ಡ ನಷ್ಟ ಆಗಿದೆ. ಧಾರ್ಮಿಕ ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಜೀವನದ ಕೊನೆವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ ಡಿ ಪಿ ಐ ಪಕ್ಷ ಸಂಘಟನೆಗಳ ಸೇವಾಕಾರ್ಯ, ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದ ಹೈದರ್ ನೀರ್ಸಾಲ್ ನಿಧನಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಕರ್ನಾಟಕ ಇದರ ಸಂಚಾಲಕ ಜಾಫರ್ ಸಾಧಿಕ್ ಫೈಝಿ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp