ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್ ಕುಮಾರಸ್ವಾಮಿ

Prasthutha|

ಮಂಡ್ಯ: ಉಪ್ಪು ತಿಂದವರು ನೀರು ಕುಡಿಯಲೇಬೇಕು. ಹಾಸನ ಸಂಸದರನ್ನು ಕುಮಾರಣ್ಣ ಮೊದಲ ದಿನವೇ ಅಮಾನತು ಮಾಡಿದ್ದಾರೆ. ಈವರೆಗೆ ಪ್ರಜ್ವಲ್ ನನ್ನ ಸಂಪರ್ಕಕ್ಕೂ ಬಂದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾತನಾಡಿರುವ ಅವರು, ಈ ಪ್ರಕರಣವನ್ನು ಸಿಬಿಐಗೆ ಕೊಟ್ಟು ರಾಜ್ಯ ಸರ್ಕಾರ ಕೂಲಂಕಷವಾಗಿ ತನಿಖೆ ಮಾಡಲಿ ಎಂದು ಹೇಳಿದ್ದಾರೆ.
ಪೆನ್ ಡ್ರೈವ್ ವಿಚಾರವಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ. ಅದನ್ನು ನಾವು ಸ್ವಾಗತ ಮಾಡ್ತೀವಿ. ಆರೋಪ ಬಂದಾಗ ನಾವು ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಾಗಲೇ ಈ ಸಂಬಂಧ ತನಿಖೆ ನಡೆಯಿತ್ತಿದೆ. ತನಿಖೆ ಪಾರದರ್ಶಕವಾಗಿ ತನಿಖೆ ನಡೆಯುತ್ತಿದ್ಯಾ? ಎಂಬ ಪ್ರಶ್ನೆ ಇದೆ ಎಂದರು.

Join Whatsapp