ಸ್ಟೇಷನ್ ಮಾಸ್ಟರ್ ಮಾಡುವ ಕೆಲಸ: ಪ್ರಧಾನಿಯ ವಂದೇ ಭಾರತ್ ರೈಲು ಉದ್ಘಾಟನೆ ಛೇಡಿಸಿದ ಪ್ರಕಾಶ್ ರೈ

Prasthutha|

ಬೆಂಗಳೂರು: ಇಂದು ದೇಶದ ವಿವಿಧೆಡೆ ವಂದೇ ಭಾರತ್ ರೈಲುಗಳ ಉದ್ಘಾಟನೆಯನ್ನು ನಟ ಪ್ರಕಾಶ್ ರೈ ಛೇಡಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಬ್ಬ ಸ್ಟೇಷನ್ ಮಾಸ್ಟರ್ ಇದನ್ನು ಮಾಡಬಹುದು. ನಾವು ನಿಜವಾಗಿಯೂ ನಿಮ್ಮನ್ನು ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ನೋಡಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


ಬೆಂಗಳೂರು-ಧಾರವಾಡದ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಇದೇ ವೇಳೆ ಭೋಪಾಲ್-ಇಂದೋರ್, ಭೋಪಾಲ್-ಜಬಲ್ಪುರ, ರಾಂಚಿ-ಪಾಟ್ನಾ ಮತ್ತು ಮಡಗಾಂವ್- ಮುಂಬಯಿ ಮಾರ್ಗದ ವಂದೇ ಭಾರತ್ ರೈಲುಗಳಿಗೆ ಪ್ರಧಾನಿಯವರಿಂದ ಚಾಲನೆ ದೊರೆಯಿತು.

- Advertisement -

Join Whatsapp