‘ದ್ವೇಷ, ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದ’: ನಟ ಪ್ರಕಾಶ್​ ರೈ ಟ್ವೀಟ್

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್​ ರಾಜ್​, ‘ದ್ವೇಷ ಮತ್ತು ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

- Advertisement -

ಮೊದಲಿನಿಂದಲೂ ಬಿಜೆಪಿ ನಿಲುವುಗಳನ್ನು ವಿರೋಧಿಸಿಕೊಂಡು ಬಂದಿರುವ ಪ್ರಕಾಶ್​ ರೈ ಅವರಿಗೆ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಖುಷಿ ನೀಡಿದೆ.
ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್​, ಅಮಿತ್​ ಶಾ ಅವರನ್ನು ವ್ಯಂಗ್ಯಮಾಡುವ ರೀತಿಯ ಫೋಟೋ ಹಂಚಿಕೊಂಡಿರುವ ಅವರ ಟ್ವೀಟ್​ ವೈರಲ್​ ಆಗಿದೆ.

ಜಸ್ಟ್​ ಆಸ್ಕಿಂಗ್​ ಎಂಬ ಹ್ಯಾಷ್​ಟ್ಯಾಗ್​‌ನೊಂದಿಗೆ ‘ದ್ವೇಷ ಮತ್ತು ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದಗಳು. ಬೆತ್ತಲೆಯಾದ ಚಕ್ರವರ್ತಿ’ ಎಂದು ಪ್ರಕಾಶ್​ ರಾಜ್​ ಅವರು ಟ್ವೀಟ್​ ಮಾಡಿದ್ದಾರೆ.

Join Whatsapp