Home ರಾಜ್ಯ ‘ಬಿಜೆಪಿಯು ದೀನ – ದಲಿತರ ಪರವಿದೆ’ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

‘ಬಿಜೆಪಿಯು ದೀನ – ದಲಿತರ ಪರವಿದೆ’ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಬಿಜೆಪಿಯು ಸದಾ ದೀನ ದಲಿತರ ಪರ ಕಾರ್ಯಾಚರಿಸುತ್ತದೆ. ಅವರ ಏಳಿಗೆಗಾಗಿ ಕಾರ್ಯೋನ್ಮುಖವಾಗಿರುತ್ತದೆ ಎಂದು ಬಿಜೆಪಿ ಮುಖಂಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ರಾಜ್ಯ ಬಿಜೆಪಿ ಸರ್ಕಾರವು ಮೀಸಲಾತಿ ಹೆಚ್ಚಳ ಮಾಡಿರುವುದು, ಸರಕಾರ ದಲಿತರ ಪರ ಇದೆ ಎಂಬುವುದಕ್ಕೆ ಸಾಕ್ಷಿ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

ʼಕಾಂಗ್ರೆಸ್ ಪಕ್ಷವು ದಲಿತರನ್ನು ಕೇವಲ ಮತ ಬ್ಯಾಂಕ್ಗಾಗಿ ಬಳಸಿಕೊಂಡಿದೆ. ಅವರ ಅಭಿವೃದ್ಧಿ ಬಗ್ಗೆ ಯೋಚಿಸಲೇ ಇಲ್ಲ. ಈ ಕಾರಣಕ್ಕೆ ದಲಿತರ ಸ್ಥಿತಿ ಇಂದಿಗೂ ಶೋಚನೀಯವಾಗಿದೆʼ ಎಂದು ಕಾಲೆಳೆದಿದ್ದಾರೆ.

Join Whatsapp
Exit mobile version