Home ರಾಜ್ಯ ಕರ್ನಾಟಕದ ಬಗ್ಗೆ ಒಂದು ದಿನವಾದ್ರೂ ಮಾತನಾಡದ ಪ್ರಲ್ಹಾದ್​​ ಜೋಶಿ: ಬಿಕೆ ಹರಿಪ್ರಸಾದ್

ಕರ್ನಾಟಕದ ಬಗ್ಗೆ ಒಂದು ದಿನವಾದ್ರೂ ಮಾತನಾಡದ ಪ್ರಲ್ಹಾದ್​​ ಜೋಶಿ: ಬಿಕೆ ಹರಿಪ್ರಸಾದ್

ಹಾವೇರಿ: ಕರ್ನಾಟಕದ ಬಗ್ಗೆ ಒಂದು ದಿನವಾದರೂ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾತನಾಡಿದ್ದಾರಾ ಎಂದು ಕಾಂಗ್ರೆಸ್​ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ಕೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಷಿ ಚುನಾವಣೆ ಸಂದರ್ಭದಲ್ಲಿ ಮಹದಾಯಿ ಬಗ್ಗೆ ಬಹಳ ಕೂಗಾಡಿದರು. ಕೊನೆಗೆ ಏನಾದರೂ ನೀರು ಬಿಟ್ಟಿದ್ದಾರಾ ಎಂದೂ ಕೇಳಿದ್ದಾರೆ. ನನ್ನ ಮೇಲೆ ಹೇಳಿಕೆ ನೀಡಿದರೆ ಮುಂದಿನ ಬಾರಿ ಅವರಿಗೆ ಟಿಕೆಟ್ ಸಿಕ್ಕುತ್ತೆ, ಸಂತೋಷ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಬಹಳಷ್ಟು ನಾಯಕರು ಈಗಾಗಲೇ ಮಾರ್ಗದರ್ಶನ ಮಂಡಳಿಗೆ ಹೋಗುತ್ತಿದ್ದಾರೆ. ಉದಾಸಿ, ನಾರಾಯಣಸ್ವಾಮಿ, ಡಿವಿಎಸ್​ ಚುನಾವಣೆ ನಿಲ್ಲಲ್ಲ ಅಂದಿದ್ದಾರೆ. ಕಳೆದ ಬಾರಿ ಮುಖ್ಯಮಂತ್ರಿ ಆಗಲು ಸಚಿವ ಪ್ರಲ್ಹಾದ್​ ಜೋಶಿ ಶತಪ್ರಯತ್ನ ಮಾಡಿದ್ದರು. ಬಿಜೆಪಿ ಹೀನಾಯ ಸ್ಥಿತಿಗೆ ತರಲು ಕಾರಣ ಯಾರೆಂದು ಅವರನ್ನೇ ಕೇಳಿ. ಯಾವುದೋ ಸಂತೋಷದ ಗುಂಪಿನ ಜೊತೆಗೆ ಸೇರಿಕೊಂಡಿದ್ದರು. ಅದರಿಂದಲೇ ರಾಜ್ಯದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ ಎಂದು ಜೋಷಿ ವಿರುದ್ದ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.

ವಿಜಯೇಂದ್ರ ಮೊದಲು ಶಾಸಕ ಯತ್ನಾಳ್ ಹೇಳಿಕೆಗೆ ಉತ್ತರ ಕೊಡಲಿ. ಆಗ ಜನಸಾಮಾನ್ಯರು, ಬಿಜೆಪಿ ಕಾರ್ಯಕರ್ತರು ನೆಮ್ಮದಿಯಿಂದ ಇರ್ತಾರೆ ಎಂದು ಬಿ.ಕೆ.ಹರಿಪ್ರಸಾದ್ ಇದೇ ಸಂದರ್ಭ ವಿಜಯೇಂದ್ರರವರ ಹೇಳಿಕಯೊಂದಕ್ಕೆ ತಿರುಗೇಟು ನೀಡಿದ್ದಾರೆ.

Join Whatsapp
Exit mobile version