ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ರಾಹುಲ್ – ಪ್ರಶಾಂತ್ ಕಿಶೋರ್ ಮಾತುಕತೆ

Prasthutha|

ನವದೆಹಲಿ: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಚುನಾವಣಾ ತಂತ್ರಜ್ಞರಾದ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯನ್ನು ದೆಹಲಿಯ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ವರದಿಗಳಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರಕಾರ, ಸಭೆಯಲ್ಲಿ ನಡೆದ ಚರ್ಚೆಯ ಮಾಹಿತಿ ಲಭ್ಯವಾಗದಿದ್ದರೂ ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ನಲ್ಲಿ ತಲೆದೋರಿರುವ ಭಿನ್ನಮತ ಮತ್ತು ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆಂದು ಹೇಳಲಾಗುತ್ತಿದೆ.

ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಕಳೆದ ವಾರ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕಿಶೋರ್ ಅವರನ್ನು ದೆಹಲಿಯ ಸಿಎಂ ಅವರ ನಿವಾಸ ಕಪುರ್ಥಾಲಾ ಹೌಸ್ ನಲ್ಲಿ ಭೇಟಿಯಾಗಿದ್ದರು. ಈ ನಿಟ್ಟಿನಲ್ಲಿ ರಾಹುಲ್ – ಕಿಶೋರ್ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪಕ್ಷದ ಹಿರಿಯ ಮುಖಂಡರಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್ ಈ ಸಭೆಯಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.

Join Whatsapp