ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಕಿಡಿ ಕಾರಿದ ಸಂಸದ ಪ್ರತಾಪ್ ಸಿಂಹ

Prasthutha|

ಮೈಸೂರು : ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವಿರುದ್ದ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ಕಿಡಿ ಕಾರಿದ್ದಾರೆ. ನಿಮ್ಮ ನಿರ್ಲಕ್ಷತನದಿಂದಾಗಿ ಮೈಸೂರು ಜಿಲ್ಲೆಯಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. ಮೈಸೂರಿನಲ್ಲಿ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ಮೇ ತಿಂಗಳಲ್ಲೇ ಒಂದು ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದವರು ಹೇಳಿದ್ದಾರೆ. ಹಳ್ಳಿ ಕಡೆ ಹೆಚ್ಚು ಗಮನ ಕೊಡಿ ಎಂದು ನಾನು ಹೇಳಿದ್ದೆ. ಇಷ್ಟೆಲ್ಲದರ ನಡುವೆ ಸರಿಯಾದ ಯೋಜನೆ ಮಾಡದೆ ಪಾಸಿಟಿವ್ ರೇಟ್ ಹೆಚ್ಚಾಗಿರುವುದು ಬೇಸರ ತಂದಿದೆ. ಈಗ ಸಹ 10ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇದ್ದು, ಸರಿಪಡಿಸಬೇಕಿದೆ. ಇದಕ್ಕಾಗಿ ಕಳೆದ 10 ದಿನಗಳಿಂದ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರತಾಪ್ ಸಿಂಹ ಹೇಳಿದರು.

- Advertisement -

ಮುಂಬರುವ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ಪರಿಶ್ರಮ ವಹಿಸಲಾಗುತ್ತದೆ. ಹೊಸದಾಗಿ ಬಂದಿರುವ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ರವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದವರು ಇದೇ ವೇಳೆ ಹೇಳಿದ್ದಾರೆ.

Join Whatsapp