ಸೋಮಾರಿ ಸಿದ್ದ ಪದ ಬಳಕೆ ಸಿಎಂ ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Prasthutha|

ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಸಿದ್ದು ಅಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

- Advertisement -

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದರು.

ಮಂಗಳವಾರ ನಾನು ಬಳಸಿದ್ದ ನಾಣ್ನುಡಿಯನ್ನು ನಿಮಗೆ ಬಳಸಿದ್ದು ಅಂತಾ ತಿರುಚುವ ಯತ್ನ ನಡೆದಿದೆ. ಮೈಸೂರಿನಲ್ಲಿನ ನಿಮ್ಮ ಹಿಂಬಾಲಕರಿಗೆ ಎಂಪಿ ಟಿಕೆಟ್, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಗ ಕೊಡಿ. ನಿಮ್ಮನ್ನು ಓಲೈಸಲು ನಿಮ್ಮ ಹಿಂಬಾಲಕರು ನನ್ನ ಮೇಲೆ ವಿನಾಕಾರಣ ಸುಳ್ಳು ಸೃಷ್ಟಿ ಮಾಡುತ್ತಾರೆ, ಅವರಿಗೆ ಬೇಗ ಅಧಿಕಾರ ಕೊಡಿ ಎಂದು ಕಿಡಿಕಾರಿದರು.

Join Whatsapp