ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಾ ಕುಳಾಯಿ ವಿರುದ್ಧ ನಿಂದನೆ ಮಾಡಿದ್ದ ಆರೋಪಿ ಶ್ಯಾಮಸುದರ್ಶನ್ ಭಟ್ ಗೆ ಜಾಮೀನು

Prasthutha|

ಮಂಗಳೂರು: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ಯಾಮಸುದರ್ಶನ್ ಭಟ್ ಹೊಸಮೂಲೆಗೆ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

ಟೋಲ್ ಗೇಟ್ ವಿರೋಧಿ ಪ್ರತಿಭಟನೆಯ ವೇಳೆ ತೆಗೆದ ತನ್ನ ಫೋಟೋಗಳನ್ನು ಮತ್ತು ವೀಡಿಯೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು ನಿಂದಿಸಲಾಗಿದೆ ಎಂದು ಪ್ರತಿಭಾ ಕುಳಾಯಿ ದೂರು ನೀಡಿದ್ದರು. ಈ ಸಂಬಂಧ ಶ್ಯಾಮಸುದರ್ಶನ್ ಸೇರಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಅ.25ರಂದು ಜಾಮೀನು ಕೋರಿ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದ ಸುದರ್ಶನ್ ಭಟ್ ಹೊಸಮೂಲೆಗೆ ಜಾಮೀನು ದೊರೆತಿದೆ.

- Advertisement -

Join Whatsapp