ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ನನ್ನು ಕೊಲೆ ಮಾಡಲಾಯಿತು: ಶರಣ್ ಪಂಪ್ ವೆಲ್

Prasthutha|

- Advertisement -

ಗುಜರಾತ್ ಗಲಭೆ ಹಿಂದೂಗಳ ಪರಾಕ್ರಮದ ಸಂಕೇತ: ವಿವಾದಾತ್ಮಕ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ತುಮಕೂರು: ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಝಿಲ್ ನನ್ನು ಕೊಲೆ ಮಾಡಲಾಯಿತು. ಇದು ಹಿಂದೂ ಯುವಕರ ಸಾಮರ್ಥ್ಯ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.

- Advertisement -

ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಶರಣ್ ಪಂಪ್ವೆಲ್, ಗುಜರಾತ್ ಗಲಭೆಯನ್ನು ಹಿಂದೂಗಳ ಪರಾಕ್ರಮಕ್ಕೆ ಹೋಲಿಕೆ ಮಾಡಿದ್ದಾರೆ.

59 ಕರಸೇವಕರ ಹತ್ಯೆಯ ಪ್ರತೀಕಾರಕ್ಕೆ 2 ಸಾವಿರ ಜನರ ಹತ್ಯೆ ಹಿಂದೂಗಳು ನಪುಂಸಕರಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 59 ಜನ ಕರಸೇವಕರ ಹತ್ಯೆಗೆ ಪ್ರತಿಕಾರವಾಗಿ 2 ಸಾವಿರ ಜನರ ಹತ್ಯೆ ಮಾಡಿದ್ದೇವೆ. ಇದು ಹಿಂದೂಗಳ ಪರಾಕ್ರಮ. ಹಿಂದುಗಳು ಷಂಡರಲ್ಲ ಎಂದು ಈ ಘಟನೆ ತೋರಿಸುತ್ತದೆ ಎಂದಿದ್ದಾರೆ.

Join Whatsapp