Home ಟಾಪ್ ಸುದ್ದಿಗಳು ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ನನ್ನು ಕೊಲೆ ಮಾಡಲಾಯಿತು: ಶರಣ್ ಪಂಪ್ ವೆಲ್

ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ನನ್ನು ಕೊಲೆ ಮಾಡಲಾಯಿತು: ಶರಣ್ ಪಂಪ್ ವೆಲ್

ಗುಜರಾತ್ ಗಲಭೆ ಹಿಂದೂಗಳ ಪರಾಕ್ರಮದ ಸಂಕೇತ: ವಿವಾದಾತ್ಮಕ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ತುಮಕೂರು: ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಝಿಲ್ ನನ್ನು ಕೊಲೆ ಮಾಡಲಾಯಿತು. ಇದು ಹಿಂದೂ ಯುವಕರ ಸಾಮರ್ಥ್ಯ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಶರಣ್ ಪಂಪ್ವೆಲ್, ಗುಜರಾತ್ ಗಲಭೆಯನ್ನು ಹಿಂದೂಗಳ ಪರಾಕ್ರಮಕ್ಕೆ ಹೋಲಿಕೆ ಮಾಡಿದ್ದಾರೆ.

59 ಕರಸೇವಕರ ಹತ್ಯೆಯ ಪ್ರತೀಕಾರಕ್ಕೆ 2 ಸಾವಿರ ಜನರ ಹತ್ಯೆ ಹಿಂದೂಗಳು ನಪುಂಸಕರಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 59 ಜನ ಕರಸೇವಕರ ಹತ್ಯೆಗೆ ಪ್ರತಿಕಾರವಾಗಿ 2 ಸಾವಿರ ಜನರ ಹತ್ಯೆ ಮಾಡಿದ್ದೇವೆ. ಇದು ಹಿಂದೂಗಳ ಪರಾಕ್ರಮ. ಹಿಂದುಗಳು ಷಂಡರಲ್ಲ ಎಂದು ಈ ಘಟನೆ ತೋರಿಸುತ್ತದೆ ಎಂದಿದ್ದಾರೆ.

Join Whatsapp
Exit mobile version