ಪ್ರವೀಣ್ ಹತ್ಯೆ ಹಿನ್ನೆಲೆ: ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಹೆದರಿ ಜನೋತ್ಸವ ರದ್ದು ಪಡಿಸಿದ ಸರ್ಕಾರ

Prasthutha|

►ಮಧ್ಯರಾತ್ರಿ ಸುದ್ದಿ ಗೋಷ್ಠಿಯಲ್ಲಿ ಸಿಎಂ ಘೋಷಣೆ

- Advertisement -

ಬೆಂಗಳೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರು ಘಟನೆ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಾಗಿದ್ದ ಬಿಜೆಪಿಯ ಜನೋತ್ಸವ ಹಾಗೂ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾತ್ರೋರಾತ್ರಿ ರದ್ದುಪಡಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಪತ್ರಿಕಾಗೋಷ್ಠಿ ಕರೆದು ಈ ಘೋಷಣೆ ಮಾಡಿದರು. ‘ಮನಃಸಾಕ್ಷಿ ಒಪ್ಪಿರಲಿಲ್ಲ. ತುಂಬಾ ತೊಳಲಾಟದಲ್ಲಿದ್ದೆ. ಹಾಗಾಗಿ ಕಾರ್ಯಕ್ರಮ ರದ್ದುಪಡಿಸಲು ನಿರ್ಧರಿಸಿದೆ’ ಎಂದು ಹೇಳಿದ್ದಾರೆ. ಅತ್ಯಂತ ಅಮಾಯಕ ಯುವಕನ ಕೊಲೆ ಇದಾಗಿದೆ. ಈ ಘಟನೆ ನೋಡಿ ಮನಸ್ಸಿಗೆ ಶಾಂತಿ ಇರಲಿಲ್ಲ. ಯುವಕನ ತಾಯಿಯ ಆಕ್ರಂದನ ನೋಡಿ ಮನಸ್ಸಿಗೆ ನೋವಾಯಿತು. ಈ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಸುವುದು ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಜನೋತ್ಸವ ಹಾಗೂ ಸಾಧನಾ ಸಮಾವೇಶ ರದ್ದು ಗೊಳಿಸಲಾಗಿದೆ. ಬದಲಾಗಿ ಕೇವಲ ಪತ್ರಿಕಾಗೋಷ್ಠಿ ಮಾತ್ರ ಇರುತ್ತದೆ ಎಂದು ಹೇಳಿದರು.

- Advertisement -

ಹಿಂಸೆಯ ಮೂಲಕ ದ್ವೇಷ ಬಿತ್ತುವ ಹುನ್ನಾರ ಹಿನ್ನೆಲೆಯಲ್ಲಿ ಈ ಕೃತ್ಯವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ, ಕೇರಳ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂತಹ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ಜಾರಿಯಲ್ಲಿರುವ ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಕಾನೂನು ಕ್ರಮ ಜರಗಿಸಲು ಚಿಂತನೆ ಇದೆ ಎಂದರು.

ಜೊತೆಗೆ ಪ್ರವೀಣ್ ಹತ್ಯೆಗೆ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಬೊಟ್ಟು ಮಾಡಿದ ಸಿಎಂ ಬೊಮ್ಮಾಯಿ, ಪಿಎಫ್ಐನಂತಹ ಸಂಘಟನೆಗಳನ್ನು ಸದೆಬಡಿಯಲು ವಿಶೇಷ ತರಬೇತಿಯ ಸ್ಪೆಷಲ್ ಕಮಾಂಡೋ ಪಡೆ ರಚಿಸುವುದಾಗಿ ಹೇಳಿದ್ದಾರೆ

Join Whatsapp