ಕೋವಿಡ್ ನಿಂದ ಗುಣಮುಖರಾಗಿದ್ದರೂ ಗರ್ಭಿಣೆ ಮಹಿಳೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ನಿರಾಕರಣೆ: ಗರ್ಭದಲ್ಲೇ ಪ್ರಾಣ ಬಿಟ್ಟ ಅವಳಿ ಕಂದಮ್ಮಗಳು

Prasthutha|

ಮಲಪ್ಪುರಂ: ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ ಕಾರಣದಿಂದ ಗರ್ಭಿಣಿ ಮಹಿಳೆಯೋರ್ವರ ಅವಳಿ ಮಕ್ಕಳು ಹೊಟ್ಟೆಯಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ಮಲಪ್ಪುರಂನಲ್ಲಿ ರವಿವಾರ ನಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ.

- Advertisement -

ಮಹಿಳೆ  ಕೋವಿಡ್ 19ರಿಂದ ಗುಣಮುಖರಾಗಿದ್ದು ಸೆ.15ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಆದರೆ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು ಅವರನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಾರ ತಾನು ನೆಗಟೀವ್ ಎಂಬುದನ್ನು ಸಾಬೀತುಪಡಿಸಲು ಬೇಕಾದ ಆರ್.ಟಿ-ಪಿಸಿಆರ್ ಪರೀಕ್ಷೆ ವರದಿಯನ್ನು ಆಕೆ ಹೊಂದಿರಲಿಲ್ಲ ಎಂಬುದಾಗಿ ಮೂರು ಆಸ್ಪತ್ರೆಗಳು ಹೇಳಿವೆ. ಮಹಿಳೆಯ ಪತಿ ಶರೀಫ್ ಆಕೆಯನ್ನು ಆಸ್ಪತ್ರೆಗೆ ಸೇರಿಸುವುದಕ್ಕಾಗಿ 14 ಗಂಟೆಗಳ ಕಾಲ ತೀವ್ರ ಪ್ರಯತ್ನ ಪಟ್ಟಿದ್ದರು.

- Advertisement -

ಪತ್ನಿಯನ್ನು ಆಸ್ಪತ್ರೆಯಲ್ಲಿ ದಾಖಲಿಸುವುದಕ್ಕಾಗಿ ತಾನು ಎರಡು ಜಿಲ್ಲೆಗಳ ಮಧ್ಯೆ ಓಡಾಡಿದ್ದು, ಅಂತಿಮವಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಸೇರಿಸಿಕೊಳ್ಳಲಾಯಿತು ಎಂದು ಪತಿ ಆಸಿಫ್ ಹೇಳಿದ್ದಾರೆ. ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.

Join Whatsapp