ವಿಧಾನಸಭಾ ಚುನಾವಣೆ ತಯಾರಿ: ಜನವರಿ 3ರಿಂದ ಸಿದ್ದರಾಮಯ್ಯರಿಂದ ಬಸ್ ಯಾತ್ರೆ

Prasthutha|

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಎದುರಿಸಲು ಸರ್ವಸನ್ನದ್ಧವಾಗಿದೆ. ಸಿದ್ದರಾಮೋತ್ಸವ ಬಳಿಕ ಸಿದ್ದರಾಮಯ್ಯನವರು ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ ಮಾಡಿದ್ದು, ಇದೇ ಜನವರಿ 3ರಿಂದ ಸಿದ್ದರಾಮಮಯ್ಯನವರ ಬಸ್ ಯಾತ್ರೆ ಆರಂಭವಾಗಲಿದೆ.

- Advertisement -

ಬಸವಕಲ್ಯಾಣದಿಂದ ಆರಂಭವಾಗಲಿರುವ ಸಿದ್ದು ಬಸ್ ಯಾತ್ರೆ, ಉತ್ತರ ಕರ್ನಾಟಕದ ಪ್ರಮುಖ10ರಿಂದ 12 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಈ ಹಿಂದೆ ಲಿಂಗಾಯತ ಧರ್ಮ ವಿಭಜಕ ಎಂಬ ಹಣೆ ಪಟ್ಟಿ ಹೋಗಲಾಡಿಸಲು ಬಸವಕಲ್ಯಾಣದ ಅನುಭವ ಮಂಟಪದಿಂದಲೇ ಯಾತ್ರೆ ಆರಂಭಿಸಲಿದ್ದಾರೆ. ಇದಕ್ಕೆ ಈಗಾಗಲೇ ಹೈಟೆಕ್ ಬಸ್ ಸಿದ್ಧವಾಗಿದೆ.

ಇನ್ನು ಸಿದ್ದರಾಮಯ್ಯನವರು ಉತ್ತರ ಕರ್ನಾಟಕದಿಂದ ಬಸ್ ಯಾತ್ರೆ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ಬಸ್ ಯಾತ್ರೆ ಮಾಡುವ ಸಾಧ್ಯತೆ ಇದ್ದು, ಇದಕ್ಕೆ ಈಗಾಗಲೇ ಹೈಟೆಕ್ ಬಸ್ ಸಹ ರೆಡಿಯಾಗಿದೆ. ಡಿಕೆ ಶಿವಕುಮಾರ್ ಕೂಡ ಜನವರಿಯಲ್ಲಿ ತಮ್ಮ ಬಸ್ ಯಾತ್ರೆ ಶುರುಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

Join Whatsapp