ಮಂಗಳೂರಿಗೆ ರಾಷ್ಟ್ರಪತಿ ಕೋವಿಂದ್: ನಗರ ಸಂಚಾರ ಮಾರ್ಗದಲ್ಲಿ ಬದಲಾವಣೆ

Prasthutha|

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳೂರು ನಗರಕ್ಕೆ ಆಗಮಿಸಲಿದ್ದು , ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ ನಲ್ಲಿ ವಾಸ್ತವ್ಯ ಹೂಡುವ ಕಾರಣ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಸರ್ಕ್ಯೂಟ್ ಹೌಸ್‌ ನ ಸುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮಂಗಳೂರು ನಗರ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ.

- Advertisement -

ದಿನಾಂಕ 07.10.2021 ರಂದು ಸಂಜೆ 06:00 ಗಂಟೆಯಿಂದ ದಿನಾಂಕ 08.10.2021 ರಂದು ಬೆಳಿಗ್ಗೆ 11:00 ಗಂಟೆಯ ವರೆಗೆ ವಾಹನ ಸಂಚಾರವನ್ನು ಮಾರ್ಗ ಬದಲಾವಣೆಗೊಳಿಸಲಾಗಿದೆ.

ಕೆಪಿಟಿ ಕಡೆಯಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್ – ಬಟ್ಟಗುಡ್ಡೆ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸುವುದು.

- Advertisement -

ಕೆಎಸ್‌ ಆರ್‌ ಟಿಸಿ, ಬಿಜೈ, ಬಟ್ಟಗುಡ್ಡೆ ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು ಕುಂಟಿಕಾನ ಮುಖಾಂತರ ರಾಷ್ಟ್ರೀಯ ಹೆದ್ದಾರಿ ಕಡೆಗೆ ಚಲಿಸುವುದು.

ಬಂಟ್ಸ್ ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡೆ ಮುಖಾಂತರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್ ಹಾಸ್ಟೆಲ್ ಸರ್ಕಲ್ ಮಲ್ಲಿಕಟ್ಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಂತೂರು ಜಂಕ್ಷನ್ ಮುಖಾಂತರ ಮುಂದುವರಿಯುವುದು ಎಂದು ತಿಳಿಸಲಾಗಿದೆ.

Join Whatsapp