ಉತ್ತರ ಪ್ರದೇಶ: ಎಸ್‌ ಪಿ ಮುಖಂಡ ಫಿರೋಝ್ ಹತ್ಯೆ, ಬಿಗುವಿನ ವಾತಾವರಣ

Prasthutha|

ಬಲರಾಮ್‌ ಪುರ: ಸಮಾಜವಾದಿ ಪಕ್ಷದ ಮುಖಂಡ ಮತ್ತು ತುಳಸಿಪುರದ ನಗರ ಪಂಚಾಯತ್‌ ನ ಮಾಜಿ ಅಧ್ಯಕ್ಷ ಫಿರೋಝ್ ಪಪ್ಪು (41) ಅವರನ್ನು ತಡ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ತುಳಸಿಪುರದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

- Advertisement -

ಫಿರೋಝ್ ಪಪ್ಪು ಜರ್ವಾದಿಂದ ಮನೆಗೆ ಹಿಂದಿರುಗುವ ಸಂದರ್ಭ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ  ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಫಿರೋಝ್ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಬೆಂಬಲಿಗರು ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಹೇಮಂತ್‌ ಕುತಿಯಾಲ್‌ ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಕಾರರ ಮನವೊಲಿಸಿ ವಾಪಸ್‌ ಕಳುಹಿಸಿದ್ದಾರೆ.

- Advertisement -

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉದ್ವಿಗ್ನಗೊಂಡ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Join Whatsapp