ರಾಷ್ಟ್ರಪತಿ ಚುನಾವಣೆ: ಸೋನಿಯಾ, ಮಮತಾ ಬೆಂಬಲ ಕೋರಿದ ದ್ರೌಪದಿ ಮುರ್ಮು

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ನಾಮಪತ್ರ ಸಲ್ಲಿಸುವ ಮುನ್ನ ಪ್ರಮುಖ ವಿಪಕ್ಷ ನಾಯಕರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್ ಸಿಪಿ ವರಿಷ್ಠ ಶರದ್ ಪವಾರ್, ಟಿಎಂಸಿ ನಾಯಕಿ ಹಾಗು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಬೆಂಬಲವನ್ನು ಕೋರಿದ್ದಾರೆ.

- Advertisement -


ಮುರ್ಮು ಅವರು ಜೂನ್ 18ರಂದು ನಡೆಯವ ರಾಷ್ಟ್ರಪತಿ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರತಿಪಕ್ಷಗಳ ಮೂವರು ಪ್ರಮುಖ ನಾಯಕರಿಗೆ ದೂರವಾಣಿ ಕರೆಮಾಡಿ, ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಇದಕ್ಕೆ ಪ್ರತಿಯಾಗಿ ಮೂವರು ನಾಯಕರು ಕೂಡಾ ಮುರ್ಮು ಅವರಿಗೆ ಶುಭ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp