ರಾಷ್ಟ್ರಪತಿ ಚುನಾವಣೆ: ಮಮತಾ ಕರೆಗೆ ಹೆಚ್ ಡಿಕೆ ನಾಳೆ ದೆಹಲಿ‌ಗೆ

Prasthutha|

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ನವದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ದೊರಕಿವೆ.

- Advertisement -

ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಹೆಚ್ ಡಿಕೆ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಆಮಂತ್ರಣವಿದೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದಿದ್ದಾರೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲ ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆಂದು ತಿಳಿಸಿದ್ದಾರೆ.

Join Whatsapp