ರಾಷ್ಟ್ರಪತಿ ಚುನಾವಣೆ; NDA ವಿರುದ್ಧ ಜಂಟಿ ಅಭ್ಯರ್ಥಿ ಕಣಕ್ಕೆ

Prasthutha|

ಹೊಸದಿಲ್ಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ ಡಿಎ) ಅಭ್ಯರ್ಥಿಯ ವಿರುದ್ಧ ಜಂಟಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಚಿಂತನೆ ನಡೆಸಿವೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಬಹಿರಂಗ  ಹೇಳಿಕೆ ನೀಡಿದ್ದಾರೆ.

- Advertisement -

ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಅವರು, “ ವಿರೋಧ ಪಕ್ಷಗಳ ಆಯ್ಕೆಯು, ಎನ್ ಡಿಎ ಅಭ್ಯರ್ಥಿ ಆಯ್ಕೆಯನ್ನು ಅವಲಂಬಿಸಿರುತ್ತದೆ. ಆಡಳಿತಾರೂಢ ಮೈತ್ರಿಕೂಟದ ರಾಜಕೀಯ ಅಥವಾ ಸಾಮಾಜಿಕ ಮಾನದಂಡಗಳನ್ನು ಸರಿಹೊಂದುವಂಥ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಇತಿಹಾಸದಲ್ಲಿ ಎಪಿಜೆ ಅಬ್ದುಲ್ ಕಲಾಂ ಅವರು ಮಾತ್ರ ಬಹುತೇಕ ಅವಿರೋಧ ಆಯ್ಕೆಯಾಗಿದ್ದರು. ಆಡಳಿತ ಪಕ್ಷ ಹಾಗೂ ಬಹುತೇಕ ವಿರೋಧ ಪಕ್ಷಗಳು ಅವರನ್ನು ಬೆಂಬಲಿಸಿದ್ದವು. ಆದರೆ ಎಡಪಕ್ಷಗಳು ಮಾತ್ರ ಎನ್ಐ ಎ ಮಾಜಿ ಸೈನಿಕರಾದ ಲಕ್ಷ್ಮಿ ಸೆಹಗಲ್ ಅವರನ್ನು ಕಣಕ್ಕೆ ಇಳಿಸಿತ್ತು.

- Advertisement -

ಮುಂದಿನ ರಾಷ್ಟ್ರಪತಿ ಚುನಾವಣೆ ಜುಲೈನಲ್ಲಿ ನಡೆಯಲಿದ್ದು, ಆಗಸ್ಟ್ ನಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮಾಜಿ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕೆ ಇಳಿಸಿದ್ದವು. ಆಡಳಿತಾರೂಢ ಪಕ್ಷಕ್ಕೆ 6,61,278 ಮತಗಳು ಸಿಕ್ಕಿದರೆ, ಮೀರಾ ಅವರಿಗೆ 4,34,241 ಮತ ದೊರಕಿತ್ತು.

Join Whatsapp