Home ಟಾಪ್ ಸುದ್ದಿಗಳು ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

ಅಬ್ದುಲ್ ಸತ್ತಾರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮುಜುಗರ ತಂದಿದ್ದು, ಅದನ್ನು ಗಂಭೀರ ವಾಗಿ ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version